ಇಂದು ಕಾರ್ಗಿಲ್ ವಿಜಯ ದಿನ..

0

ಯುದ್ಧ ಆರಂಭವಾಗಿದ್ದದರೂ ಯಾಕೆ…??

ಆಪರೇಷನ್ ಸಫೇದ್‌ ಸಾಗರ್ ಬಗ್ಗೆ ತಿಳಿದಿದೆಯಾ…??

1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ವಿಜಯ ಸಾಧಿಸಿತ್ತು. ಈ ಯುದ್ದದಲ್ಲಿ ಅನೇಕ ವೀರ ಯೋಧರು ಹುತಾತ್ಮರಾದರು.

“ಕಾರ್ಗಿಲ್ ವಿಜಯ್ ದಿವಸ್”. ಪ್ರತಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತೀಯರಿಗೆ ಇದು ಎಂದು ಮರೆಯದ ದಿವಾಗಿದೆ. ಭಾರತೀಯರು ಎಂದು ಮರೆಯದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಕೂಡಾ ಹೌದು. ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ.

1999ನೇ ಇಸವಿಯ ಜುಲೈ 26ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 24 ವರ್ಷ ತುಂಬುತ್ತದೆ. ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಲು ದೇಶವು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್‌ ಆಚರಿಸಲಾಗುತ್ತದೆ.

1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್‌ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು.

ಅಂದಹಾಗೆ ಕಾಶ್ಮೀರದಲ್ಲಿರುವ ಕಾರ್ಗಿಲ್‌ ಹಿಮಾಲಯದ ಬೆಟ್ಟಗುಡ್ಡಗಳಿಂದ ಆವೃತವಾದ ಪ್ರದೇಶ. ಕಾರ್ಗಿಲ್‌ ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿದೆ. ಲೇಹ್ ಮತ್ತು ಶ್ರೀನಗರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 1 ಕಾರ್ಗಿಲ್ ಮೂಲಕ ಹಾದು ಹೋಗುತ್ತದೆ. ಈ ಪ್ರದೇಶದಲ್ಲಿ ಇರುವ ಏಕೈಕ ಹೆದ್ದಾರಿ ಇದಾಗಿದೆ. ಅಲ್ಲದೆ ವಿಶ್ವದ ಅತ್ಯಂತ ಎತ್ತರದಲ್ಲಿರುವ ಯುದ್ಧ ಭೂಮಿ ಸಿಯಾಚಿನ್‌ಗೂ ಸಂಪರ್ಕ ಕಲ್ಪಿಸುತ್ತದೆ ಈ ಹೆದ್ದಾರಿ.

ಈ ಯುದ್ಧ ನಡೆಯಲು ಮುಖ್ಯ ಕಾರಣ ಪಾಕಿಸ್ತಾನದ ಮೋಸದಾಟ. ಕಾರ್ಗಿಲ್‌ ಪ್ರದೇಶದಲ್ಲಿ ಭಾರತ ಮತ್ತು ಪಾಕಿಸ್ತಾನದ ಲೈನ್‌ ಆಫ್‌ ಕಂಟ್ರೋಲ್‌ (ಎಲ್‌ಒಸಿ) ಇದೆ. ಈ ಪ್ರದೇಶದಲ್ಲಿ ಚಳಿಗಾಲದಲ್ಲಿ ಮೈನಸ್‌ ಡಿಗ್ರಿ ಸೆಲ್ಸಿಯಸ್‌ ಇಳಿಯುತ್ತದೆ. ಇದರಿಂದ ಇಲ್ಲಿ ಗಡಿ ಕಾಯುವುದು ಭಾರತಕ್ಕೆ ಸವಾಲಿನ ಕೆಲಸ. ಚಳಿಗಾಲದಲ್ಲಿ ಭಾರತೀಯ ಸೈನಿಕರು ಮತ್ತು ಪಾಕ್‌ ಸೈನಿಕರು ಇಲ್ಲಿಂದ ಸ್ಥಳಾಂತರಗೊಳ್ಳುತ್ತಾರೆ.

ಚಳಿಗಾಲ ಮುಗಿದ ಬಳಿಕ ಇಲ್ಲಿಗೆ ಮತ್ತೆ ಗಡಿ ಕಾಯುವುದಕ್ಕೆ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಾಗಿತ್ತು. 1999 ರಲ್ಲಿ ಈ ಸಂದರ್ಭವನ್ನೇ ಬಳಸಿಕೊಂಡ ಪಾಕಿಸ್ತಾನ, ಕಾಶ್ಮೀರದ ಹೋರಾಟಗಾರರ ಹೆಸರಿನಲ್ಲಿ ಪಾಕ್‌ ಸೈನಿಕರು, ಭಾರತದ ಪ್ರಮುಖ ಭಾಗಗಳನ್ನು ತನ್ನ ವಶಕ್ಕೆ ಪಡೆದುಕೊಂಡಿತು.

ಆರಂಭದಲ್ಲಿ ಪಾಕಿಸ್ತಾನೀಯರು ಭಾರತದ ಒಳಗೆ ಸುಮಾರು ದೂರ ನುಸುಳಿದ್ದರು. ಆದರು ಅದು ಭಾರತೀಯ ಸೇನೆಯ ಅರಿವಿಗೆ ಬಂದಿರಲಿಲ್ಲ. ಆದರೆ ಪಾಕಿಸ್ತಾನಿಯರನ್ನು ಕಂಡ ಕಾಶ್ಮೀರದ ಕೆಲವು ಕುರಿಗಾಹಿ ಜನರು, ಭಾರತೀಯ ಸೇನೆಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯ ಪ್ರರುತ್ತಾರದ ಸೇನಾಧಿಕಾರಿಗಳು, ಐದು ಯೋಧರನ್ನು ಗಸ್ತು ತಿರುಗಲೆಂದು ಕಳುಹಿಸಿಕೊಟ್ಟರು.

ಆದರೆ ಆಕ್ರಮಣ ಮನಸ್ಥತಿಯಲ್ಲಿದ್ದ ಪಾಕ್‌ನ ಸೇನೆ, ಭಾರತದ ಆ ಐದು ಯೋದರನ್ನು ಚಿತ್ರಹಿಂಸೆ ನೀಡಿ ಕೊಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಭಾರತ, ತಕ್ಷಣವೇ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಲು ನಿರ್ಧರಿಸಿತು. ಇದಕ್ಕಾಗಿ ಸೇನೆಯನ್ನು ಸಿದ್ಧಗೊಳಿಸಿತು. ಭಾರತ ಸರ್ಕಾರ ಇಪ್ಪತ್ತು ಸಾವಿರ ಭಾರತೀಯ ಸೈನಿಕರನ್ನ ಸಜ್ಜುಗೊಳಿಸಿ ಮೇ 3 ರಿಂದ ಆಪರೇಷನ್ ವಿಜಯ ಹೆಸರಿನಲ್ಲಿ ಕಾರ್ಯಚರಣೆ ಆರಂಭ ಮಾಡಿತು.

ಅತ್ತ ಪಾಕಿಸ್ತಾನವು ಕೂಡಾ ಭಾರತದ ಮೇಲೆ ದಾಳಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅದರಂತೆ ಪಾಕ್‌ ಸುಮಾರು 5,000 ಕ್ಕೂ ಹೆಚ್ಚು ಸೈನಿಕರನ್ನ ಕಳುಹಿಸಿಕೊಟ್ಟಿತ್ತು. ಇದಕ್ಕೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಶಸ್ತ್ರಸಜ್ಜಿತವಾಗಿ ಮುನ್ನುಗ್ಗಿತ್ತು. ಎತ್ತರದ ಪ್ರದೇಶದಲ್ಲಿ ಸಾಕಷ್ಟು ಸಮಸ್ಯೆ ಇದ್ದರೂ ಶೆಲ್‌ ದಾಲಿಯ ಮೂಲಕ ಭಾರತೀಯ ಸೇನೆ ಪಾಕಿಸ್ತಾನಿಯ ಬಂಕರ್‌ಗಳತ್ತ ದೃಷ್ಟಿ ಇರಿಸಿತ್ತು. ಭಾರತಕ್ಕೆ ಬೋಫೋರ್ಸ್‌ ಫಿರಂಗಿ, ವಾಯುಪಡೆಯ ಮಿಗ್-27, ಮಿಗ್-29 ಯುದ್ಧ ವಿಮಾನಗಳು ಸಾಕಷ್ಟು ಬಲ ತುಂಬಿದ್ದವು.

‘ಆಪರೇಷನ್ ಸಫೇದ್‌ ಸಾಗರ್’ ಅನ್ನು ಪ್ರಾರಂಭಿಸಿದ ಭಾರತೀಯ ಸೇನೆ, ಪಾಕಿಸ್ತಾನದ ಸೈನಿಕರ ಮೇಲೆ ದಾಳಿ ಮಾಡಲು ಇಂಡಿಯನ್ ಮಿಗ್ -21, ಮಿಗ್ -27 ಮತ್ತು ಮಿರಾಜ್ 2000 ನಂತಹ ಯುದ್ಧ ವಿಮಾನಗಳನ್ನು ಬಳಸಿತು. ಪಾಕ್‌ ಶತ್ರುಗಳನ್ನು ನಿರ್ಮೂಲನೆ ಮಾಡಲು ಐಎಎಫ್‌ ಯೋಧರು ಈ ವಿಮಾನಗಳಿಂದ ರಾಕೆಟ್ ಮತ್ತು ಕ್ಷಿಪಣಿಗಳನ್ನು ಹಾರಿಸಿದರು.

ತೈಲ ಮತ್ತು ಇಂಧನ ಪೂರೈಕೆಯನ್ನು ನಿಲ್ಲಿಸಲು ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಬಂದರುಗಳನ್ನು ನಿರ್ಬಂಧಿಸಲು ಭಾರತೀಯ ನೌಕಾಪಡೆ ‘ಆಪರೇಷನ್ ತಲ್ವಾರ್’ ಅನ್ನು ಪ್ರಾರಂಭಿಸಿತು. ಇದರಿಂದಾಗಿ ಪಾಕಿಸ್ತಾನೀಯರ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತ ಯಶಸ್ವಿಯಾಯಿತು. ಪಾಕಿಸ್ತಾನಿಗಳನ್ನು ಬಗ್ಗು ಬಡಿದ ಭಾರತೀಯ ಸೈನಿಕರು, ಜುಲೈ 24 ರಂದು ಪಾಕಿಗಳನ್ನು ಹಿಮ್ಮೆಟ್ಟಿಸಿ ಭಾರತ ಯುದ್ಧ ಗೆದ್ದಿತು. ಇದಾದ ಬಳಿಕ ಪ್ರತೀ ವರ್ಷ ಜುಲೈ 26 ರಂದು ಕಾರ್ಗಿಲ್‌ ವಿಜಯ ದಿವಸ್‌ ಅನ್ನು ಆಚರಣೆ ಮಾಡಲಾಗುತ್ತದೆ.