ಇಂದು ಪುತ್ತೂರಿನ ಪ್ರಶಾಂತ್ ಮಹಲ್ ನಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ

0

ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಕೆ. ಸೀತಾರಾಮ ರೈಯವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ ಜು. ಇಂದು (ಜು. 29) ಬೆಳಿಗ್ಗೆ 8.00 ಗಂಟೆಯಿಂದ ಪುತ್ತೂರಿನ ದರ್ಬೆಯಲ್ಲಿರುವ ಪ್ರಶಾಂತ್ ಮಹಲ್ ನ ಸನ್ನಿಧಿ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10.00 ಗಂಟೆಯಿಂದ ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಆಟಿಯ ಆಟ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.00 ಗಂಟೆಗೆ 49 ವಿಧದ ಆಟಿಯ ವಿಶೇಷ ಖಾದ್ಯಗಳನ್ನೊಳಗೊಂಡಿರುವ ಭೋಜನ ನಡೆಯಲಿದೆ.
ಭೋಜನಕ್ಕೆ
ರೂ. 349/- ಪಾವತಿಸಬೇಕಿದ್ದು, ಕೂಪನ್ ಹೋಟೆಲ್ ನ ಬಿಲ್ಡಿಂಗ್ ಕೌಂಟರ್ ನಲ್ಲಿ ಲಭ್ಯವಿದೆ ಎಂದು ಸಂಘಟಕರಾದ ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.