ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರಿಗೆ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸನ್ಮಾನ

0

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರನ್ನು ಇಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಉಪಾಧ್ಯಕ್ಷರಾದ ಮಹಮ್ಮದ್ ಕುಂಞ ಗೂನಡ್ಕ, ನಿರ್ದೇಶಕರಾದ ಕೆ.ಪಿ.ಜಾನಿ, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕ, ಸಂಪಾಜೆ ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತ ಗೌಡ ಪೆಲ್ತಡ್ಕರವರು ಮಂಗಳೂರಿನಲ್ಲಿ ಭೇಟಿಯಾಗಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.

ಇದೇ ವೇಳೆ ಸಂಪಾಜೆ ಗ್ರಾಮದ ಪ್ರಮುಖ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಪಾಜೆ ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆಯ ವತಿಯಿಂದ ಯು.ಟಿ.ಖಾದರ್ ಅವರಿಗೆ ಮನವಿಯನ್ನು ಮಾಡಲಾಯಿತು.