ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಿವೃತ್ತರಿಗೆ ಬೀಳ್ಕೊಡುಗೆ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು ೩೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಭೀಮ ಭಟ್ ಮಾನಾಡು ಮತ್ತು ರುಕ್ಮಿಣಿ ದೇವರಗದ್ದೆ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜು.31 ರಂದು ನಡೆಯಿತು.

ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನಿವೃತ್ತರನ್ನು ಸನ್ಮಾನಿಸಿ ಗೌರವಿಸಿದರು.
ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಮುಖ್ಯಅತಿಥಿಗಳಾಗಿದ್ದರು.

ಶ್ರೀ ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ವೇದಿಕೆಯಲ್ಲಿದ್ದರು. ಸಿಬ್ಬಂಧಿಗಳಾದ ನೋಣಪ್ಪ.ಕೆ, ಮೋಹನ ಎಂ.ಕೆ, ಪುರುಷೋತ್ತಮ್, ಬಾಲಕೃಷ್ಣ ಆರ್ ಅನಿಸಿಕೆ ವ್ಯಕ್ತಪಡಿಸಿದರು. ಶ್ರೀ ದೇವಳದ ಅನಂತ ಪದ್ಮನಾಭ ಆಚಾರ್ ವಂದಿಸಿದರು. ಮಹೇಶ್ ಕುಮಾರ್.ಎಸ್ ಕಾರ್ಯಕ್ರಮ ನಿರೂಪಿಸಿದರು.