ಕಳಂಜ : ವಿಷ್ಣುನಗರ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಕೊಡುಗೆ

0


ಕಳಂಜ ವಿಷ್ಣುನಗರ ಅಂಗನವಾಡಿ ಕೇಂದ್ರಕ್ಕೆ ಸತೀಶ್ ಕಳಂಜ ಮತ್ತು ರಮ್ಯ ದಂಪತಿಗಳ ಪುತ್ರ ಮೌರ್ಯ ನ 4 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪ್ರೆಷರ್ ಕುಕ್ಕರನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರಂಜಿತಾ ರೈ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ರೈ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಯಶೋದಾ, ಅಂಗನವಾಡಿ ಸಹಾಯಕಿ ಕಮಲ, ಆಶಾ ಕಾರ್ಯಕರ್ತೆ ಜಯಂತಿ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಅಕ್ಷತಾ, ಅಂಗನವಾಡಿ ಪುಟಾಣಿಗಳು ಮತ್ತು ಪೋಷಕರು,ಊರವರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ರಂಜಿತಾ ರೈ ಸ್ವಾಗತಿಸಿ , ಉಪಾಧ್ಯಕ್ಷ ಗಣೇಶ್ ರೈ ವಂದಿಸಿದರು.