ಶಾಂತಿನಗರ ದೀಪಾಂಜಲಿ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ

0

ಶಾಂತಿನಗರ ದೀಪಾಂಜಲಿ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಜು. 23 ರಂದು ಶಾಂತಿನಗರ ಶಾಲಾ ರಂಗಮಂದಿರದಲ್ಲಿ ನಡೆಯಿತು. ಶ್ರೀಮತಿ ಉಮಾವತಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಲತಾ ದೆಂಗೋಡಿ, ಶ್ರೀಮತಿ ದೇವಕಿ ಚಿನ್ನಪ್ಪ ಸೋಣಂಗೇರಿ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.
ವೇದಿಕೆಯಲ್ಲಿ ಮಹಿಳಾ ಮಂಡಲದ ಸ್ಥಾಪಕಾಧ್ಯಕ್ಷೆ ಶ್ರೀಮತಿ ಹರ್ಷ ಕರುಣಾಕರ ಸೇರ್ಕಜೆ, ಉಪಸ್ಥಿತರಿದ್ದರು.

ಶ್ರೀಮತಿ ಉಮಾವತಿ ಸ್ವಾಗತಿಸಿ, ವರದಿ ವಾಚಿಸಿದರು. ಶ್ರೀಮತಿ ಇಂದಿರಾ ಮಂಚಿ ಲೆಕ್ಕಪತ್ರ ಮಂಡಿಸಿದರು. ನೂತನ ಅಧ್ಯಕ್ಷೆ ಶ್ರೀಮತಿ ಲಲಿತಾ .ಎಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶ್ರೀಮತಿ ಬಿಂದು ಚಂದ್ರನ್ ವಂದಿಸಿದರು.