ಕನಕಮಜಲು ಪ್ರಾ.ಕೃ.ಪ.ಸಹಕಾರಿ ಸಂಘಕ್ಕೆ ಕೃಷಿ ಯಂತ್ರೋಪಕರಣ ಖರೀದಿಯಲ್ಲಿ ದ್ವಿತೀಯ ಸ್ಥಾನ

0

ದ.ಕ. ಕೃಷಿ ಅಭಿವೃದ್ಧಿ ಸಂಘದಿಂದ ಪ್ರಶಸ್ತಿ ಪ್ರಧಾನ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಂಘದಿಂದ 2022 – 23ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸಿದ್ದು, ದ್ವಿತೀಯ ಸ್ಥಾನ ಪಡೆದಿದ್ದು, ಜು.31ರಂದು ಮಂಗಳೂರಿನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2022 – 23ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ, ತಮ್ಮ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ಮಾಜಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ನಿರ್ದೇಶಕ ಶೇಷಪ್ಪ ನಾಯ್ಕ ಕಜೆಗದ್ದೆ ಉಪಸ್ಥಿತರಿದ್ದರು.