ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಶಿಕ್ಷಗೆ ನ್ಯಾಯಾಲಯ ತಡೆ

0

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕಿದ ಜಯ : ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ

ಕಾಂಗ್ರೆಸ್ ನಾಯಕರಾಗಿರುವ ರಾಹುಲ್ ಗಾಂಧಿಯವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂದ ಜಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಮೇಲಿನ ಜನರ ನಂಬಿಕೆ ಈ ತೀರ್ಪಿನ ಮೂಲಕ ಮತ್ತಷ್ಟು ಬಲಪಡಿಸಿದೆ. ದೇಶದ ಪ್ರತಿಯೊಬ್ಬ ಭಾರತೀಯ ಕೂಡಾ ಸಂತಸ ಪಡುವ ದಿನ. ರೈತರ ಸಮಸ್ಯೆ, ನಿರುದ್ಯೋಗ
ಹೆಚ್ಚುತ್ತಿರುವ ಕೋಮುವಾದದ ವಿರುದ್ಧ ನಮ್ಮ ನಾಯಕರ ಧ್ವನಿ ಲೋಕಸಭೆಯಲ್ಲಿ ಮತ್ತೊಮ್ಮೆ ಪ್ರತಿಧ್ವನಿಸಲಿ ಎಂದು ಅವರು ಹೇಳಿದ್ದಾರೆ.