ಉಡುಪಿ ಖಾಸಗಿ ಕಾಲೇಜಿನಲ್ಲಿ ಶೌಚಾಲಯವನ್ನು ಬಳಸುವ ವಿಡಿಯೋ ಚಿತ್ರೀಕರಣ ಪ್ರಕರಣ

0

ಸುಬ್ರಹ್ಮಣ್ಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹಿಸಿ ಸುಬ್ರಹ್ಮಣ್ಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಇಂದು ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈಗಾಗಲೇ ರಾಷ್ಟ್ರದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಕೆಲ ಯುವತಿಯರು ಶೌಚಾಲಯವನ್ನು ಬಳಸುವ ವಿಡಿಯೋವನ್ನು ಚಿತ್ರೀಕರಿಸುವ ಕ್ರತ್ಯ ಎಸಗಿ ಹಿಂದೂ ಹುಡುಗಿಯರ ಮಾನ ಹಾರಾಜು ಹಾಕುವ ಬಗ್ಗೆ ಅಕ್ರೋಶ ತೋಡಿಕೊಂಡರು.
ಪೊಲೀಸ್ ಇಲಾಖೆ ಸೂಕ್ತ ರೀತಿಯ ತನಿಖೆಯನ್ನು ನಡೆಸಿ ತಪ್ಪಿತಸ್ಥರ ಮೇಲೆ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕೆಂದು, ಸುಬ್ರಹ್ಮಣ್ಯ ಎ ಬಿ ವಿ ಪಿ ಅಗ್ರಹಿಸಿದ್ದಾರೆ,


ಘಟನೆಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಗಮನಿಸಿ ಇಂಥ ಘಟನೆಯು ಇತರೆ ಕಾಲೇಜಿನಲ್ಲಿ ಮರುಕಳಿಸದಂತೆ ಇದಕ್ಕೆ ಜಿಲ್ಲೆಯ ಪ್ರತಿ ಕಾಲೇಜಿನಲ್ಲೂ ಈ ಕುರಿತು ಅರಿವು ಮೂಡಿಸುವುದು ಮತ್ತು ಇಂಥ ಘಟನೆಯನ್ನು ವರದಿ ಮಾಡಲು ಪ್ರತೀ ಕಾಲೇಜಿನಲ್ಲೂ ಒಂದು ವಿಶೇಷ ಸೆಲ್ ಮಾಡುವಂತೆ ರಾಜ್ಯ ಸರಕಾರ ನೋಡಿಕೊಳ್ಳಬೇಕು, ಗಮನಿಸಲು ಜಿಲ್ಲಾ ಮಟ್ಟದ ತಂಡವನ್ನು ಸಹ ರಚಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಮಾಧ್ಯಮಗಳಲ್ಲಿ ಬಂದಂತೆ ತಮಾಷೆಗಾಗಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದೇವೆ ಎಂಬ ತೀರ ಬಾಲಿಷ ಹಾಗೂ ಪ್ರಕರಣವನ್ನು ದಾರಿತಪ್ಪಿಸುವ ಹೇಳಿಕೆಯಾಗಿದೆ, ಶೌಚಾಲಯದ ಚಿತ್ರೀಕರಣ ಮಾಡುವಂತ ಹೇಯ ಕೃತ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕಾನೂನು ಕ್ರಮ ತೆಗೆದುಕೊಂಡು ಇದರ ಹಿಂದಿರುವಂತ ಷಡ್ಯಂತರವನ್ನು  ಬಯಲಿಗೆಳೆಯಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು. ಬಳಿಕ ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್ ಎಬಿವಿಪಿ ವತಿಯಿಂದ ಮನವಿ ನೀಡಿದರು.

ಪ್ರತಿಭಟನೆ ಉದ್ದೇಶಿಸಿ ಎ.ಬಿ.ವಿ.ಪಿ ಪುತ್ತೂರು ಜಿಲ್ಲಾ ಸಂಚಾಲಕಿ ಮಂದಾರ ಬಾಳುಗೋಡು, ಎಸ್.ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ
ಪ್ರೀಕ್ಷಾ, ಹಿರಿಯ ಕಾರ್ಯಕರ್ತ ಚರಣ್ ಮಾತನಾಡಿದರು.
ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯ ಕಾರ್ಯ ಕಾರಿಣಿ ಸದಸ್ಯ ಸೃಜನ್ ಶೆಟ್ಟಿ,
ಸುಬ್ರಹ್ಮಣ್ಯ
ನಗರ ಕಾರ್ಯದರ್ಶಿ ರುತೇಶ್ ಮತ್ತಿತರರು ಉಪಸ್ಥಿತರಿದ್ದರು.