ಬೂಡು ಭಗವತಿ ಕ್ಷೇತ್ರದಲ್ಲಿ ಧರ್ಮಸ್ಥಳ ಯೋಜನೆಯ ವತಿಯಿಂದ ಸ್ವಚ್ಚತೆ ಮತ್ತು ಗಿಡ ನೆಡುವ ಕಾರ್ಯಕ್ರಮ

0

ಕೇರ್ಪಳ ಬೂಡು ಭಗವತಿ ಕ್ಷೇತ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇರ್ಪಳ ಒಕ್ಕೂಟದ ಸದಸ್ಯರಿಂದ ಶ್ರದ್ಧಾ ಕೇಂದ್ರದ ಸ್ವಚ್ಚತೆ ಹಾಗೂ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮವು ಜೂ. 6 ರಂದು ನಡೆಯಿತು.

ಜನಜಾಗೃತಿ ವೇದಿಕೆಯ ಸದಸ್ಯ ಪದ್ಮನಾಭ ಜೈನ್ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸುಳ್ಯ ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ಬೂಡು ರಾಧಾಕೃಷ್ಣ ರೈ, ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಭಟ್, ಭಗವತಿ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ವಾಸುದೇವ ನಾಯಕ್ ಕೇರ್ಪಳ, ಮಂಜು ಕುರುಂಜಿಗುಡ್ಡೆ ,ಮೋಹನ್ ಕೇರ್ಪಳ, ‌ಭಾಸ್ಕರ ಕುರುಂಜಿಗುಡ್ಡೆ,ಸೇವಾ ಪ್ರತಿನಿಧಿ ಪ್ರೇಮಲತಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.


ಭಗವತಿ ದೇವಸ್ಥಾನದ ಹೊರಾಂಗಣವನ್ನು ಹಾಗೂ ಚೆಯರ್ ಪಾತ್ರೆಗಳನ್ನು ತೊಳೆದು ಶುಚಿಗೊಳಿಸಿದರು. ಪರಿಸರದಲ್ಲಿ ವಿವಿಧ ಬಗೆಯ ಹೂವಿನ ಗಿಡಗಳನ್ನು ನೆಡಲಾಯಿತು.
ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರ್ವಹಿಸಿದರು.