ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಸುಳ್ಯ ವಲಯದ ಪರಿವಾರಕಾನ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವಲಯದ ಪರಿವಾರಕಾನ ಒಕ್ಕೂಟದ ವತಿಯಿಂದ ಧರ್ಮಅರಣ್ಯದ ಶ್ರೀ ಗುರು ಗಣಪತಿ ಭಕ್ತ ಭಜನಾ ಮಂದಿರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗಣೇಶ್ ಇಂಡಸ್ಟ್ರೀಸ್ ಇದರ ಮಾಲಕ ಜಗದೀಶ್ ಸರಳಿಕುಂಜರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರಿಯಾ ಹಾಗೂ ಧರ್ಮ ಅರಣ್ಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕುಮಾರಸ್ವಾಮಿ ಗುರು ಗಣಪತಿ ಭಕ್ತ ಭಜನಾ ಮಂಡಳಿಯ ಅಧ್ಯಕ್ಷರಾದ ವಿಜಯ ಸರಳಿಕುಂಜ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಗಣೇಶ್ ಬಿ ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹಲ್ ದಡ್ಕ ಹಾಗೂ ಸೇವಾ ಪ್ರತಿನಿಧಿಯಾದ ಸುರೇಶ್ ಪರಿವಾರಕಾನ ಒಕ್ಕೂಟದ ಸುಮಾರು 50 ಜನ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿರುತ್ತಾರೆ