ಕಲ್ಲುಗುಂಡಿ: ಸುನ್ನೀ ಸೆಂಟರ್ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

0

ಉದ್ಘಾಟನೆಗೊಳಿಸಿ ಶುಭ ಹಾರೈಸಿದ ಸಯ್ಯಿದ್ ಬಾಯಾರ್ ತಂಙಳ್

ಕಲ್ಲುಗುಂಡಿ ಎಸ್ ಎಸ್ ಎಫ್, ಎಸ್ ವೈ ಎಸ್,ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸೆಂಟರ್ ಕಚೇರಿ ವಿಶಾಲತೆಗಾಗಿ ಸಂಗಂ ಬಿಲ್ಡಿಂಗ್ ಗೆ ಸ್ಥಳಾಂತರಗೊಂಡು ಆ 5 ರಂದು ಉದ್ಘಾಟನೆಗೊಂಡಿತು.

ನೂತನ ಕಚೇರಿಯನ್ನು ನೂರುಸ್ಸಾದಾತ್ ಸಯ್ಯಿದ್ ಬಾಯಾರ್ ತಂಙಳ್ ರವರು ಉದ್ಘಾಟನೆಗೊಳಿಸಿ ಪ್ರಾರ್ಥನೆ ನಡೆಸಿ ಶುಭ ಹಾರೈಸಿದರು.
ಸಯ್ಯಿದ್ ತ್ವಾಹಿರ್ ಸಅದಿ ತಂಙಳ್ ಬಾಅಲವಿ ಸುಳ್ಯ ರವರು ದುಆಃ ಗೆ ನೇತೃತ್ವ ವಹಿಸಿ ಉಪದೇಶವನ್ನು ನೀಡಿದರು. ಎಸ್ ಎಸ್ ಎಫ್ ಯೂನಿಟ್ ಅಧ್ಯಕ್ಷ ಅಲೀ ಚಟ್ಟೆಕಲ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ ವೈ ಎಸ್ ಮುಖಂಡ ಅಬ್ದುಲ್ಲತೀಫ್ ಸಖಾಫಿ ಗೂನಡ್ಕ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ ಮಾತನಾಡಿ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಪಾಜೆ ಜಮಾಅತ್ ಸ್ವಲಾತ್ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಬೋಂಬೈ ರವರು ಅತಿಥಿಗಳಾಗಿ ಭಾಗವಹಿಸಿದ್ದ ರು.
ಗ್ರಾಮ ಪಂಚಾಯತ್ ಸದಸ್ಯರಾದ ಸವಾದ್ ಗೂನಡ್ಕ ಶುಭನುಡಿಗಳನ್ನಾಡಿದರು.

ಅಬ್ದುಲ್ ಜಲೀಲ್ ಸಖಾಫಿ ಕೊಂಡಂಗೇರಿ ರವರ ನೇತೃತ್ವದಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನಡೆದು ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.ಎಸ್ ವೈ ಎಸ್ ರಾಜ್ಯ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕ್ಕಾರ್ಸ್,ಸುಳ್ಯ ಝೋನ್ ನಾಯಕರಾದ ಹಸೈನಾರ್ ಗುತ್ತಿಗಾರು, ಹಲವು ಗಣ್ಯರು ಭಾಗವಹಿಸಿದರು. ಎಸ್ಸೆಸ್ಸೆಫ್ ಕಲ್ಲುಗುಂಡಿ ಯೂನಿಟ್ ಪ್ರಧಾನ ಕಾರ್ಯದರ್ಶಿ ರುನೈಝ್ ಸ್ವಾಗತಿಸಿ ವಂದಿಸಿದರು. ಎ.ಎಂ.ಫೈಝಲ್ ಝುಹ್‌ರಿ ಕಾರ್ಯಕ್ರಮ ವನ್ನು ನಿರೂಪಿಸಿದರು.