ದೇವ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಮುಕುಂದ ಹಿರಿಯಡ್ಕ, ಕಾರ್ಯದರ್ಶಿಯಾಗಿ ಜಯಂತ ದೇವ

0

ದೇವ ಗೆಳೆಯರ ಬಳಗದ ವಿಶೇಷ ಸಭೆಯು ಆ.6 ರಂದು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಯೋಗೀಶ್ ದೇವ, ಅಧ್ಯಕ್ಷರಾಗಿ ಮುಕುಂದ ಹಿರಿಯಡ್ಕ, ಉಪಾಧ್ಯಕ್ಷರಾಗಿ ಚೇತನ್ ಪಡ್ಪು, ಕಾರ್ಯದರ್ಶಿಯಾಗಿ ಜಯಂತ ದೇವ, ಜತೆ ಕಾರ್ಯದರ್ಶಿಯಾಗಿ ಸವಿತ್ ದೇವ, ಕೋಶಾಧಿಕಾರಿಯಾಗಿ ಮಹೇಶ್ ಪಾಲೆಪ್ಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಶರತ್ ಕುಮಾರ್ ದೇವ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಿತ್ ಕನ್ನಡಕಜೆ ಯವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷರಾದ ರಮೇಶ ಪಡ್ಪು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. 33ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಠಮಿಯ ಆಚರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.