ಐವರ್ನಾಡು : ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ

0

ಶಾಸಕಿ ಭಾಗೀರಥಿ ಮುರುಳ್ಯರವರಿಂದ ಕಾರ್ಯಕ್ರಮ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ ಆ.7 ರಂದು ನಡೆಯಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಪಿಡಿಒ ಶ್ಯಾಮಪ್ರಸಾದ್ ಉಪಸ್ಥಿತರಿದ್ದರು.

ತರಬೇತುದಾರರಾಗಿ ಡಾ. ಸುಪ್ರೀತಾ ಬಿ ಯು ಮತ್ತು ಮೀನುಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮೋಫ್ ಕೆ.ಆರ್ , ನವೀನ್ ಚಂದ್ರ ಚಾತುಬಾಯಿ ಇವರು ಮುತ್ತು ಕೃಷಿ ಬಗ್ಗೆ ಮಾಹಿತಿ ನೀಡಿದರು. ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಂಜುಳಾಶ್ರೀ ಶೆಣೈ ರವರು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು. ಪ್ರಗತಿ ಪರ ಕೃಷಿಕ, ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಸಿಹಿನೀರು ಮುತ್ತು ಕೃಷಿ ಮಾಡುತ್ತಿರುವ ನವೀನ್ ಚಂದ್ರ ಚಾತುಬಾಯಿ ಅವರ ಮನೆಗೆ ಭೇಟಿ ನೀಡಿ ಮುತ್ತು ಕೃಷಿಯ ಬಗ್ಗೆ ಮಾಹಿತಿ ನೀಡಲಾಯಿತು.