ಬೈತಡ್ಕ: ಬಸ್ – ಅಂಬ್ಯುಲೆನ್ಸ್ ಅಪಘಾತ: ಜಖಂ

0

ರೋಗಿಯನ್ನು ಕರೆದೊಯ್ಯತ್ತಿದ್ದ ಅಂಬ್ಯುಲೆನ್ಸ್ ಗೆ ಢಿಕ್ಕಿ: ಅಪಾಯದಿಂದ ಪಾರು

ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಬಸ್ ಹಾಗೂ ಅಂಬ್ಯುಲೆನ್ಸ್ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡ ಘಟನೆ ಆ.9ರಂದು ಸಂಜೆ ಸಂಭವಿಸಿದೆ.


ಕಾಸರಗೋಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ಕೆ.ಎಸ್.ಆರ್.ಟಿ.ಸಿ. ಮಲಬಾರ್ ಬಸ್ಸು ಹಾಗೂ ಮಡಿಕೇರಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ್ದು, ಅಂಬ್ಯುಲೆನ್ಸ್ ನಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ರೋಗಿಯನ್ನು ಬೇರೆ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ.