ಸುಬ್ರಹ್ಮಣ್ಯ: ನೂತನ ಅಧ್ಯಕ್ಷ ಉಪಾಧ್ಯಕ್ಷರಿಂದ ಲಂಚ ಭ್ರಷ್ಟಾಚಾರ ವಿರೋಧಿ ಮತದಾರರ ಜಾಗೃತಿ ಆಂದೋಲನಕ್ಕೆ ಬೆಂಬಲ- ಫಲಕ ಸ್ವೀಕಾರ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಲಂಚ ಭ್ರಷ್ಟಾಚಾರ ವಿರೋಧಿ ಮತದಾರರ ಜಾಗೃತಿಯ ಸುದ್ದಿಯ ಜನಾಂದೋಲನಕ್ಕೆ ಬೆಂಬಲ ನೀಡಿದರು.

ನೂತನ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಹಾಗೂ ಉಪಾಧ್ಯಕ್ಷ ಹೆಚ್ ಎಲ್ ವೆಂಕಟೇಶ್ ರವರು ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಕಾಶ್, ಕಾರ್ಯದರ್ಶಿ ಮೋನಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಫಲಕ ನೀಡಿದರು.