ಚದುರಂಗ ಸ್ಪರ್ಧೆಯಲ್ಲಿ ಜ್ಞಾನದೀಪ ಎಲಿಮಲೆಯ ನೇಹಾ ಸಿಪಿ ರಾಜ್ಯಮಟ್ಟಕ್ಕೆ

0

 ಆ.10ರಂದು ನಡೆದ ಶ್ರೀರಾಮ ವಿದ್ಯಾ ಸಂಸ್ಥೆ ಪಟ್ಟೂರು ಬೆಳ್ತಂಗಡಿ ತಾಲೂಕು ಇಲ್ಲಿ ನಡೆದ ವಿದ್ಯಾ ಭಾರತಿಯ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಯ ಎಂಟನೇ ತರಗತಿಯ ವಿದ್ಯಾರ್ಥಿನಿ ನೇಹಾ.ಸಿ.ಪಿ. ನಾಲ್ಕನೇ ಬಹುಮಾನವನ್ನು ಪಡೆದು  ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ದಿನಾಂಕ ಆ.12ರಂದು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ.