ಕನಕಮಜಲು: ಕೆಸರುಗದ್ದೆ ಕ್ರೀಡಾಕೂಟ ಉದ್ಘಾಟನೆ

0

ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಶುಭಹಾರೈಕೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು, ಯುವಕ ಮಂಡಲ, ಕನಕಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಕನಕಮಜಲಿನ ಸಾಂತ್ಯಡ್ಕ (ಕನ್ನಡ್ಕ) ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟವು ಆ.13ರಂದು ನಡೆಯಿತು.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ದಯಾನಂದ ಕೇರ್ಪಳ, ಯುವಕ ಮಂಡಲದ ಅಧ್ಯಕ್ಷ ಚಂದ್ರಶೇಖರ ನೆಡಿಲು, ಪ್ರಾಂಶುಪಾಲ ದಾಮೋದರ ಕಣಜಾಲು, ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಲ್ಯಣ್ಣ ಗೌಡ ಶಾಂತಿಯಡ್ಕ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಹೇಮಂತ ಮಠ, ಚಂದ್ರಶೇಖರ ಕುದ್ಕುಳಿ, ನೇತ್ರ ಕುಮಾರ್, ಬಾಲಚಂದ್ರ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಕುಸುಮಾವತಿ ಅಡ್ಕಾರು, ಪ್ರೇಮ ಅಡ್ಕಾರು, ಯಮುನಾ ಶಾಂತಿಯಡ್ಕ, ರೇಖಾ ಅಡ್ಕಾರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಶಾಲಾ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯುತ್ತಿದ್ದು, ಸಂಜೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವು ಜರುಗಲಿದೆ.