ಧವನ್ ದೇವರಗುಂಡ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ.

0

ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಕೇಶವ ಭಟ್ಟ &ಸನ್ಸ್ ಇವರು ಇನ್ನರ್ ವೀಲ್ ಕ್ಲಬ್ ಸಹಯೋಗದೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಂಡ ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆಯಲ್ಲಿ 8-12ವರ್ಷದ ವಯೋಮಿತಿ ವಿಭಾಗದಲ್ಲಿ ಧವನ್ ದೇವರಗುಂಡ ಪ್ರಥಮ ಸ್ಥಾನ ಗಳಿಸಿದ್ದಾನೆ.

ಈ ಸ್ಪರ್ಧೆಯಲ್ಲಿ ಒಟ್ಟು 77 ಸ್ಪರ್ಧಿಗಳು ಭಾಗವಹಿಸಿದ್ದರು. ಈ ಪುಟಾಣಿ ಕಳೆದ ಬಾರಿಯೂ ಮುಳಿಯದವರು ಪ್ರಸ್ತುತಪಡಿಸಿದ ಛದ್ಮವೇಷ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದನು .

ಈ ಬಾಲ ಪ್ರತಿಭೆ ಮಂಡೆಕೋಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ನಾಗೇಶ್ ದೇವರಗುಂಡ ಮತ್ತು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಉಪನ್ಯಾಸಕಿ ರೇಷ್ಮಾ ನಾಗೇಶ್ ದಂಪತಿಯ ಪುತ್ರ. ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇಲ್ಲಿನ 4ನೇ ತರಗತಿ ವಿದ್ಯಾರ್ಥಿ.