ಜಾಲ್ಸೂರು: ಕದಿಕಡ್ಕ ಅಮೃತ ಸರೋವರ ಬಳಿ ನೂತನ ಧ್ವಜಸ್ತಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಗ್ರಾಮ ಪಂಚಾಯತಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿರುವ ಅಮೃತ ಸರೋವರ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಧ್ವಜಸ್ತಂಭದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಸರೋವರದ ಆವರಣದಲ್ಲಿ ಗಿಡ ನೆಡಲಾಯಿತು.


ಕೇಂದ್ರ ಸರಕಾರದ ನಮ್ಮ ಮಣ್ಣು ನಮ್ಮ ದೇಶ ಯೋಜನೆಯಡಿಯಲ್ಲಿ ಅಮೃತ ಸರೋವರದ ಬಳಿ ವಾಯುಸೇನೆಯ ನಿವೃತ್ತ ಕಾರ್ಪನಲ್ ಶಿವಪ್ರಸಾದ್ ಮಹಾಬಲಡ್ಕ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ, ಕಾರ್ಯದರ್ಶಿ ಸುಂದರ ಮುಪ್ಪೇರ್ಯ, ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ನೂತನ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಸದಸ್ಯರಾದ ಎನ್‌.ಎಂ.ಸತೀಶ್ ಕೆಮನಬಳ್ಳಿ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಡ್ಕಾರು, ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.