ಯೇನೆಕಲ್ಲು ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ ಧ್ವಜಾರೋಹಣ ನೆರವೇರಿಸಿದರು. ಗುತ್ತಿಗಾರು ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಾಗರಾಜ ಪರಮಲೆ ಅತಿಥಿಯಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಭರತ್ ನೆಕ್ರಾಜೆ ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ ಮತ್ತು ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಧ್ವಜವಂದನೆ ಸಲ್ಲಿಸಿದರು. ಸಂಘದ ನಿರ್ದೇಶಕಿ‌ ಶ್ರೀಮತಿ ಯಮುನ ಸಂಕಡ್ಕ ಧ್ವಜಗೀತೆ ಮತ್ತು ವಂದೇ ಮಾತರಂ ಹಾಡಿದರು. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ‌ ಶೇಖರ ಕೇದಿಗೆಬನ ಕಾರ್ಯಕ್ರಮ ನಿರೂಪಿಸಿದರು.