ಮುರುಳ್ಯ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಮುರುಳ್ಯ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಅವಿನಾಶ್ ದೇವರಮಜಲು ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ದಾನಿಗಳಾದ ಜನಾರ್ದನ ಅಲೆಕ್ಕಾಡಿ, ಯತೀಶ್ ಪಾಲೊಳಿ, ನಿಕಟ ಪೂರ್ವ ಅಧ್ಯಕ್ಷ ಶ್ರೀಮತಿ ಮಧು ಪಿ.ಆರ್. ಶಾಲಾಭಿಮಾನಿಗಳು, ಪೋಷಕರು ಭಾಗವಹಿಸಿದ್ದರು.


ಬಳಿಕ ಸ್ಕೌಟ್ಸ್ ಗೈಡ್ಸ್ ಮಕ್ಕಳ ಬ್ಯಾಂಡ್ ವಾದ್ಯ ಜೊತೆಗೆ ಅಲೆಕ್ಕಾಡಿ ಪೇಟೆಯ ಉದ್ದಕ್ಕೂ ಮೆರವಣಿಗೆ ನಡೆಸಲಾಯಿತು.
ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಅವಿನಾಶ್ ದೇವರಮಜಲು, ಶ್ರೀಮತಿ ಮಧು ಪಿ. ಆರ್., ಶ್ರೀಮತಿ ಹರ್ಷಿತಾ ಕೆ. ಎಸ್., ಮುರುಳ್ಯ ಪಂಚಾಯಿತಿ ಅಧ್ಯಕ್ಷೆ ಜಾನಕಿ ಮುರುಳ್ಯ, ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾವತಿ ಕುಕ್ಕಟ್ಟೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಶಿಕಲಾ ಪ್ರಸ್ತಾವಿಕವಾಗಿ ಮಾತನಾಡಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ನೇಹಾ ಸ್ವಾಗತಿಸಿ, ತನ್ವಿ ವಂದಿಸಿದರು. ತೃಷಾ ವೇದಿಕೆಗೆ ಆಹ್ವಾನಿಸಿದರು. ತುಷಾರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ಹಿರಿಯ ವಿದ್ಯಾರ್ಥಿಗಳು ಶಾಲಾದಾನಿಗಳು ಸಾರ್ವಜನಿಕರು ಪೋಷಕರು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.