ಚೊಕ್ಕಾಡಿ ಶ್ರೀ ಭಗವಾನ್ ಸತ್ಯ ಸಾಯಿ ವಿದ್ಯಾ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಅಮರ ಪಡ್ನೂರು ಗ್ರಾಮದ ಚೊಕ್ಕಾಡಿ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ನಡೆಯಿತು.
ವಿದ್ಯಾ ಸಂಸ್ಥೆಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕೋಟೆ ಯವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕ ಏಕನಾಥ ಶೆಟ್ಟಿ ಯವರ ಪತ್ನಿ ಶ್ರೀಮತಿ ಜಯಂತಿ ಏಕನಾಥ ಶೆಟ್ಟಿ, ಸತ್ಯ ಸಾಯಿ ಸೇವಾ ಸಮಿತಿ ಸಂಚಾಲಕ ತೇಜಪ್ರಕಾಶ್ ಉಪಸ್ಥಿತರಿದ್ದರು.

ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಮಿತಿ ಸದಸ್ಯರು, ಶಾಲಾ ಅದ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.