ಎಡಮಂಗಲ ಗ್ರಾ.ಪಂ. ಅಧ್ಯಕ್ಷರಾಗಿ ರಾಮಣ್ಣ ಜಾಲ್ತಾರು, ಉಪಾಧ್ಯಕ್ಷರಾಗಿ ದಿವ್ಯ ಅವಿರೋಧ ಆಯ್ಕೆ

0

ಎಡಮಂಗಲ ಗ್ರಾ.ಪಂ.ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ರಾಮಣ್ಣ ಜಾಲ್ತಾರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಣ್ಮೂರು ಗ್ರಾಮದ ದಿವ್ಯ ಯೋಗಾನಂದ ನಾಮಪತ್ರ ಸಲ್ಲಿಸಿದ್ದರು.

ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷರಾಗಿ ರಾಮಣ್ಣ ಜಾಲ್ತಾರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ದಿವ್ಯ ಯೋಗಾನಂದ ಅವಿರೋಧ ಆಯ್ಕೆಯಾದರು.

ರಾಮಣ್ಣ ಜಾಲ್ತಾರುರನ್ನು ನವೀನ್ ಕರಿಂಬಿ ಮತ್ತು ದಿವ್ಯರನ್ನು ಸವಿತಾ ಸೂಚಿಸಿದ್ದರು. ಕಡಬ ಸರಕಾರಿ ಪ.ಪೂ. ಕಾಲೇಜಿನ ದೈಹಿಕ ನಿರ್ದೇಶಕರಾದ ಲೋಕೇಶ್ ತಂಟೆಪ್ಪಾಡಿ ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮಾಜಿ ತಾ.ಪಂ. ಸದಸ್ಯೆ ಶ್ರೀಮತಿ ಸುಭದ ಎಸ್.ರೈ, ಶಾಸಕಿ ಕು ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮತ್ತು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಪ್ರವೀಣ್ ರೈ ಬಲ್ಕಾಡಿ ಹಾಗೂ ಸದಸ್ಯರು ಆಯ್ಕೆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಉಪಸ್ಥಿತರಿದ್ದರು. ಪಂಚಾಯತ್ ಪಿಡಿಒ ಗೋಪಿನಾಥ್ ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.