ಕು.ನೇಹಾ ಸಿ.ಪಿ.ಗೆ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ

0

ಶಿಕ್ಷಣ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಬಾಲವರ್ಗದ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೇಯಲ್ಲಿ ಕು.ನೇಹಾ ಸಿ.ಪಿ. ಪ್ರಥಮ ಸ್ಥಾನ ಪಡೆದಿದ್ದಾಳೆ.


ಹಾಗೂ ವಿದ್ಯಾಭಾರತಿ ಕರ್ನಾಟಕ ದ.ಕ. ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಚತುರ್ಥ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ, ರಾಜ್ಯಮಟ್ಟದಲ್ಲಿ ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದು, ದ್ವಿತೀಯ ತಂಡ ಪ್ರಶಸ್ತಿ ಪಡೆದಿದ್ದಾಳೆ.
ಈಕೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ೮ನೇ ತರಗತಿ ವಿದ್ಯಾರ್ಥಿನಿ. ಮಾಜಿ ಸೈನಿಕ ಪುರುಷೋತ್ತಮ ಸಿ.ಎಚ್.ಹಾಗೂ ಶ್ರೀಮತಿ ಜಾಹ್ನವಿ ದಂಪತಿಗಳ ಪುತ್ರಿ.
ಚದುರಂಗ ತರಬೇತುದಾರ ಹರಿಪ್ರಸಾದ್ ಕೊಯಿಂಗಾಜೆಯವರ ಶಿಷ್ಯೆ.