ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ವೃಕ್ಷ ಸಂರಕ್ಷಣೆ

0

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಏನೆಕಲ್ಲು ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ವೃಕ್ಷ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸುಮಾರು 25 ಕಲ್ಪವೃಕ್ಷಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಸಂಕಲ್ಪ ಕೈಗೊಳ್ಳಲಾಯಿತು.

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಡಿಬೈಲು ಕಲ್ಪವೃಕ್ಷ ನೀಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷ ವಿಶ್ವನಾಥ ನಡುತೋಟ, ನಿರ್ದೇಶಕ ಚಂದ್ರಶೇಖರ ನಾಯರ್, ಪೂರ್ವ ಅಧ್ಯಕ್ಷ ಲೋಕೇಶ್ ಬಿ ಎನ್, ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ವಿಶ್ವನಾಥ ಬಾಲಾಡಿ, ಶಾಲಾ ಮುಖ್ಯ ಶಿಕ್ಷಕಿ ಜಾನಕಿ, ಜೆ ಸಿ ಐ ಸುಬ್ರಮಣ್ಯ ಕುಕ್ಕೆ ಶ್ರೀ ಅಧ್ಯಕ್ಷ ಯೋಗನಾಥ್, ಕಾರ್ಯದರ್ಶಿ ಡಾl ರಾಜೇಶ್ವರಿ, ಸುಬ್ರಮಣ್ಯ ಇನ್ನರ್ ವೀಲ್ ಅಧ್ಯಕ್ಷೆ ಶ್ರೀಮತಿ ವೇದ ಶಿವರಾಮ್, ಸದಸ್ಯೆ ಶ್ರೀಜಾ ಚಂದ್ರಶೇಖರ್, ಗ್ರಾಮ ಪಂಚಾಯತ್ ಸದಸ್ಯ ಶಿವರಾಮ ನೇಕ್ರಾಜೆ, ಊರವರು, ಶಾಲಾ ಪೋಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.