ಹಕ್ಕು ಖುಲಾಸೆಗೆ ಹಣದ ಬೇಡಿಕೆ

0


ಅರಂತೋಡು ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ


ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.


ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ, ಇಂದು ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.