ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 7ನೇ ಬಾರಿಗೆ ಜಿಲ್ಲಾ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23ನೇ ಸಾಲಿಗೆ ಸಮಗ್ರ ವ್ಯವಹಾರ ಚಟುವಟಿಕೆಗಳಿಗೆ ಕೊಡ ಮಾಡಲ್ಪಡುವ ಜಿಲ್ಲಾ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.

ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ರವರಿಂದ ಸಂಘದ ಅಧ್ಯಕ್ಷ ಸಂತೋಷ್
ಕುತ್ತಮೊಟ್ಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಚಿತ್ರ ಶಶಿಧರ ದೇರಾಜೆ, ಭಾರತಿ ಪಿಂಡಿಮನೆ, ಗಣೇಶ್ ಕರಿಂಬಿ, ನಿಧೀಶ್ ಅರಂತೋಡು ಹಾಜರಿದ್ದರು. ಜಿಲ್ಲಾ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಸಂಘಗಳ ಉಪನಿಬಂಧಕರು, ಸಹಕಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಈ ಹಿಂದೆ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನವಾಗಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದು.