ಸುಳ್ಯ ಶಿವಳ್ಳಿ ಸಂಪನ್ನದ ವತಿಯಿಂದ ತಿಂಡಿ ಮೇಳ

0

ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಂದ ಚಾಲನೆ

ಸುಳ್ಯ ಶಿವಳ್ಳಿ ಸಂಪನ್ನದ ವತಿಯಿಂದ ವಿವಿಧ ಬಗೆಯ ಆಹಾರ ಖಾದ್ಯಗಳ ತಿಂಡಿ ಮೇಳವು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆ.20 ರಂದು ನಡೆಯಿತು.


ತಿಂಡಿ ಮೇಳಕ್ಕೆ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಯವರು ಕುದಿಯುವ ಎಣ್ಣೆಯಲ್ಲಿ ತಿಂಡಿ ಕಾಯಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಠದ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ , ಶಿವಳ್ಳಿ ಸಂಪನ್ನದ ಅಧ್ಯಕ್ಷ ರಮೇಶ್ ಭಟ್, ಸಂಚಾಲಕ ಪ್ರಕಾಶ್ ಮೂಡಿತ್ತಾಯ ರವರು ಉಪಸ್ಥಿತರಿದ್ದರು.
ತಿಂಡಿ ಮೇಳದಲ್ಲಿ ಸುಮಾರು 30 ಕ್ಕೂ ಮಿಕ್ಕಿ ವಿವಿಧ ಬಗೆಯ ಆಹಾರ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ ತರಲಾಗಿತ್ತು. ಮಠದ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.