ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ರಕ್ತೇಶ್ವರಿ ನಾಗಬನದಲ್ಲಿ ನಾಗರಪಂಚಮಿ ದಿನವಾದ ಆ.21 ರಂದು ನಾಗರ ಪಂಚಮಿ ಆಚರಣೆ ನಡೆಯಿತು.


ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.
ಶ್ರೀ ಚೆನ್ನಕೇಶವ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.