ಶಾಂತಿನಗರ : ಬೆಟ್ಟಂಪ್ಪಾಡಿ ಸಮೀಪ ಚರಂಡಿ ವ್ಯವಸ್ಥೆಗಳಿಲ್ಲದೆ ರಸ್ತೆ ತುಂಬಾ ಹರಿಯುತ್ತಿರುವ ಮಳೆ ನೀರು

0


ಶಾಂತಿನಗರ ಬೆಟ್ಟಂಪ್ಪಾಡಿ ಸಮೀಪ ಕಾಂಕ್ರೀಟ್ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದು ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.
ಒಂದು ಬದಿಯ ಮೇಲ್ಭಾಗದಿಂದ ಬರುವ ಮಳೆಯ ನೀರು ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿಗಳಿಲ್ಲದೆ ನದಿಯಂತೆ ಹರಿದು ಸ್ಥಳೀಯ ನಿವಾಸಿಗಳ ಮನೆಗಳ ಅಂಗಳಕ್ಕೆ ನೀರು ನುಗ್ಗುತ್ತಿದೆ. ಇದರಿಂದ ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಸಮಸ್ಯೆ ಅನುಭವಿಸುತ್ತಿದ್ದು, ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕಾಗಿದೆ ಎಂದು ಅಗ್ರಹಿಸಿದ್ದಾರೆ.