ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ ಕಂಪ್ಯೂಟರ್ ಕೊಡುಗೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆ.21 ರಂದು ಬ್ಯಾಂಕ್ ಆಫ್ ಬರೋಡಾದಿಂದ ಗಣಕಯಂತ್ರಗಳನ್ನು ಕೊಡುಗೆಯಾಗಿ ನೀಡಲಾಯಿತು.

ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ.ಆರ್
ಅವರು ಶ್ರೀ ದೇವಳಕ್ಕೆ ಸುಮಾರು ೧ ಲಕ್ಷದ ೨೫ ಸಾವಿರ ಮೌಲ್ಯದ ೫ ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದು ಅದನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ.ಎಸ್.ಸುಳ್ಳಿ ಮತ್ತು ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ಬ್ಯಾಂಕ್ ಆಫ್ ಬರೋಡಾದ ರೀಜನಲ್ ಮ್ಯಾನೇಜರ್ ದೇವಿಪ್ರಸಾದ್ ಶೆಟ್ಟಿ ಹಸ್ತಾಂತರಿಸಿದರು.

ಬಳಿಕ ಬಿಓಬಿಯ ರೀಜನಲ್ ಮ್ಯಾನೇಜರ್ ದೇವಿಪ್ರಸಾದ್ ಶೆಟ್ಟಿ ಅವರನ್ನು ದೇವಳದ ಆಡಳಿತ ಕಚೇರಿಯಲ್ಲಿ ಶಾಲು ಹೊದಿಸಿ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಬಿಓಬಿಯ ಪುತ್ತೂರು ರೀಜನಲ್ ಆಫೀಸ್‌ನ ವೆಂಕಟ್, ಬಿಓಬಿಯ ಸುಬ್ರಹ್ಮಣ್ಯ ಶಾಖಾ ಪ್ರಬಂಧಕ ಕೃಷ್ಣಪ್ರಸಾದ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.