ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ನಿಂದ ಹಿರಿಯರಿಗೆ ಗೌರವಾರ್ಪಣೆ

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ವಿಶ್ವಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಆ.21 ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಿರಿಯ ನಾಗರಿಕರಿಗೆ ಗೌರವಾರ್ಪಣೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷ ರಾಮಚಂದ್ರ ಪಳಂಗಾಯ ವಹಿಸಿದ್ದರು .

ಮುಖ್ಯ ಅತಿಥಿಯಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅದ್ಯಕ್ಷೆ ಸುಜಾತ ಕಲ್ಲಾಜೆ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಕೆ ಆರ್ ಶೆಟ್ಟಿಗಾರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಹಿರಿಯ ನಾಗರಿಕರಾದ ಕೂಜುಗೋಡು ಕಟ್ಟೆ ಮನೆ ನಿವೃತ್ತ ಅಧ್ಯಾಪಕ ಕೆ. ಪದ್ಮಯ್ಯ ಗೌಡ, ಸುಬ್ರಹ್ಮಣ್ಯ ಅಗ್ರಹಾರದ ನಿವೃತ್ತ ಉಪನ್ಯಾಸಕ ವಿದ್ವಾನ್ ಕೇಶವ ಭಟ್ ,ಮಾಣಿ ಬೈಲು ನಿವೃತ್ತ ಶಿಕ್ಷಕಿ ಶ್ರೀಮತಿ ತೇಜಮ್ಮ ಕೆ ಎಸ್ ಇವರುಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರಿಚಯವನ್ನು ವಿಷ್ಣು ಪಾತಿಕಲ್ಲು ವಾಚಿಸಿದರು. ಅಶೋಕ್ ಮೂಲೆಮಜಲು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸುಬ್ರಮಣ್ಯ ಲಯನ್ಸ್ ಕ್ಲಬ್ಬಿನ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ ಸದಸ್ಯರುಗಳು ಹಾಜರಿದ್ದರು. ವಿಮಲಾ ರಂಗಯ್ಯ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸತೀಶ್ ಕೂಜುಗೋಡು ಸ್ವಾಗತಿಸಿದರು. ಖಜಾಂಜಿ ಚಂದ್ರಶೇಖರ ಪಾನತ್ತಿಲ ವಂದಿಸಿದರು.