ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ಪುಣ್ಯ ತಿಥಿ ಅಂಗವಾಗಿ ನುಡಿನಮನ

0

ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆ. 22ರಂದು ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಉಪಾಧ್ಯಕ್ಷೆ ಶ್ರೀಮತಿ ಶೋಭ ಚಿದಾನಂದ, ಕಾಲೇಜಿನ ಡೀನ್ ನೀಲಾಂಬಿಕೈ
ನಟರಾಜನ್, ಡಾ. ಶೀಲಾ ಜಿ ನಾಯಕ್ ಸೇರಿದಂತೆ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.