ಪ್ರಣವ ಸೌಹಾರ್ದ ಸಹಕಾರಿ ಸಂಘ : ಗ್ರಾಹಕರಿಗೆ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ

0

ಯೆಯ್ಯಾಡಿಯಲ್ಲಿ ಪ್ರಧಾನ ಕಚೇರಿ ಹಾಗೂ ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಮೈಸೂರಿನಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಗ್ರಾಹಕರ ಅನುಕೂಲಕ್ಕಾಗಿ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆ ಆರಂಭಿಸಿದೆ.

ಸಂಸ್ಥೆಯ ಸದಸ್ಯ ಹಾಗೂ ಗ್ರಾಹಕರಲ್ಲೊಬ್ಬರಾದ ಮಾಜಿ ಸೈನಿಕ ಪ್ರಭಾಕರ ಗುಂಡದ ಅವರು ಮಂಗಳೂರಿನ ಪ್ರಣವ ಸೌಹಾರ್ದ ಪ್ರಧಾನ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಅವರು ಶುಭಾಶಂಸನೆಗೈದರು. ಸಹಕಾರಿ ಅಧ್ಯಕ್ಷ ಜಿ.ಆರ್.ಪ್ರಸಾದ್‌, ಅವರು ಪ್ರಸ್ತಾಪಿಸಿ ಸಂಸ್ಥೆಯ ದ್ವೇಯೋದ್ದೇಶಗಳನ್ನು ವಿವರಿಸಿದರು.

ನಿರ್ದೇಶಕ ಭಗವಾನ್ ದಾಸ್ ಅತ್ಯಂತಾಯ ಸ್ವಾಗತಿಸಿದರು. ಇನ್ನೋರ್ವ ನಿರ್ದೇಶಕ ರವಿಶಂಕರ್ ವಂದಿಸಿದರು. ನಿರ್ದೇಶಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.