ಜಾನಕಿ ವೆಂಕಟ್ರಮಣ ಗೌಡರವರ 11 ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನುಡಿ ನಮನ

0


ಜಾನಕಿ ವೆಂಕಟ್ರಮಣ ಗೌಡರವರ ೧೧ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಉಪಪ್ರಾಂಶುಪಾಲರಾದ ಡಾ.ಶ್ರೀಧರ ಕೆ. ಮತ್ತು ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಮಾಶಂಕರ್ ಕೆ.ಎಸ್.ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರುಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್& ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊಫೆಸರ್ ಪ್ರೊ. ಲೋಕೇಶ್ ಪಿ.ಸಿ. ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬಂಧಿಗಳು ಭಾಗವಹಿಸಿದ್ದರು.