ಬೆಳ್ಳಾರೆ ಕೆಪಿಎಸ್ ನಲ್ಲಿ ಸುದ್ದಿ ಸಮೂಹ ಸಂಸ್ಥೆ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಲಂಚ,ಭ್ರಷ್ಟಾಚಾರ ವಿರೋಧಿ ಆಂದೋಲನದ ಫಲಕ ಅನಾವರಣ

ಸುದ್ದಿ ಸಮೂಹ ಸಂಸ್ಥೆ ,ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಬೆಳ್ಳಾರೆ ಕೆ.ಪಿ.ಎಸ್ ನ ಪ್ರಾಥಮಿಕ ಶಾಲೆಯಲ್ಲಿ ಆ.22 ರಂದು ನಡೆಯಿತು.


ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಪ್ರಸ್ತಾವಿಕವಾಗಿ ಮಾತನಾಡಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.


ಶಾಲಾ ಮುಖ್ಯ ಗುರುಗಳಾದ ಮಾಯಿಲಪ್ಪರವರು ಸ್ವಾಗತಿಸಿ , ಸ್ಪರ್ಧೆ ಮತ್ತು ಸುದ್ದಿ ಜನಾಂದೋಲನದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವರದಿಗಾರರಾದ ಗಣೇಶ್ ಕುಕ್ಕುದಡಿ,ಕುಶಾಂತ್ ಕೊರತ್ಯಡ್ಕ,ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.


ಮತದಾರ ಜಾಗೃತಿ ಲಂಚ ಭ್ರಷ್ಟಾಚಾರ ವಿರೋಧಿ ಜನಾಂದೋಲನದ ಫಲಕ ಅನಾವರಣ ನಡೆಯಿತು.