ಎಲಿಮಲೆ ಪ್ರೌಢಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಲಂಚ,ಭ್ರಷ್ಟಾಚಾರ ವಿರೋಧಿ ಆಂದೋಲನದ ಫಲಕ ಅನಾವರಣ

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಎಲಿಮಲೆ ಪ್ರೌಢ ಶಾಲೆಯಲ್ಲಿ ಆ.22 ರಂದು ನಡೆಯಿತು.
ಸುದ್ದಿ ಬಿಡುಗಡೆ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಪ್ರಸ್ತಾವಿಕವಾಗಿ ಮಾತನಾಡಿದರು.


ಶಾಲಾ ಮುಖ್ಯ ಗುರುಗಳಾದ ಸಂಧ್ಯಾರವರು ಬಹುಮಾನ ವಿತರಿಸಿದರು. ಶಿಕ್ಷಕ ಮುರಳೀಧರ ಪುನ್ಕುಟ್ಟಿ ಸ್ವಾಗತಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವರದಿಗಾರರಾದ ಶಿವರಾಮ ಕಜೆಮೂಲೆ , ದಯಾನಂದ ಕೊರತ್ತೋಡಿ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು
ಮತದಾರ ಜಾಗೃತಿ ಲಂಚ ಭ್ರಷ್ಟಾಚಾರ ವಿರೋಧಿ ಜನಾಂದೋಲನದ ಪ್ರತಿಜ್ಞೆ ಸ್ವೀಕರಿದರು.