ಅಡ್ತಲೆ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಅಡ್ತಲೆ ಹಿ.ಪ್ರಾ.ಶಾಲೆಯಲ್ಲಿ ಆ.24 ರಂದು ನಡೆಯಿತು.

ಸುದ್ದಿ ಚಾನೆಲ್ ಮುಖ್ಯಸ್ಥರಾದ ದುರ್ಗಾಕುಮಾರ್ ನಾಯರ್ ಕೆರೆ ಪ್ರಸ್ತಾವಿಕವಾಗಿ ಮಾತನಾಡಿದರು. ವರದಿಗಾರ ಕೃಷ್ಣ ಬೆಟ್ಟ ವೇದಿಕೆಯಲ್ಲಿದ್ದರು. ಶಿಕ್ಷಕ ಮುಕುಂದ ಸ್ವಾಗತಿಸಿದರು.

ಸಂಸ್ಥೆಯ ವಿದ್ಯಾರ್ಥಿಗಳು ಲಂಚ, ಭ್ರಷ್ಟಾಚಾರ ವಿರುದ್ಧ ಮತದಾನ ಜಾಗೃತಿ ಪ್ರತಿಜ್ಞೆ ಕೈಗೊಂಡರು.