ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಆ.24 ರಂದು ನಡೆಯಿತು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಲಿಂಗಪ್ಪ ಬೆಳ್ಳಾರೆರವರು ಬಹುಮಾನ ವಿತರಿಸಿದರು.

ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಲಂಚ ಭ್ರಷ್ಟಾಚಾರ ವಿರುದ್ದದ ಮತದಾನ ಜಾಗೃತಿ ಪ್ರತಿಜ್ಞೆ ಭೋದಿಸಿದರು.

ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕ ಸಂತೋಷ್ ವಂದಿಸಿದರು.

ವೇದಿಕೆಯಲ್ಲಿ ಸುದ್ದಿ ಪತ್ರಿಕೆಯ ವರದಿಗಾರ ಕುಶಾಂತ್ ಕೊರತ್ಯಡ್ಕ, ಸುದ್ದಿ ಪ್ರತಿನಿಧಿ ಸಂಕಪ್ಪ ಸಾಲ್ಯಾನ್ ಅಲೆಕ್ಕಾಡಿ,
ಎಣ್ಮುರು ಪ್ರಾ. ಆರೋಗ್ಯ ಉಪ ಕೇಂದ್ರದ ಸಮುದಾಯ ಅರೋಗ್ಯಧಿಕಾರಿ ತೇಜಸ್ವಿ ಪೂದೆ,

ಸುರಕ್ಷಾಧಿಕಾರಿ ರತ್ನಾವತಿ, ಆಶಾ ಕಾರ್ಯಕರ್ತೆಯರಾದ ಉಷಾ ಮದ್ಕುರು, ರೇವತಿ ಆಲೆಕಿ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.