ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಪ್ರಾರ್ಥನೆ

0

11 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಕುಮಾರಿ ಸೌಜನ್ಯಳಿಗೆ ಆದಷ್ಟು ಬೇಗ ನ್ಯಾಯ ದೊರಕಲಿ. ನೈಜ ಅಪರಾಧಿಗಳಿಗೆ ಶಿಕ್ಷೆ ಆಗಲಿ ಎಂದು ಸುಳ್ಯದ ಗಾಂಧಿನಗರ ಕಾರಣಿಕ ದೈವ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಇದರ ವತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.