ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗೆ ಅತ್ಯುತ್ತಮ ಕ್ರೆಡಿಟ್ ಸಹಕಾರಿ ಸಂಘ ಪ್ರಶಸ್ತಿ

0


ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿಯಲ್ಲಿ ತನ್ನ ಸದಸ್ಯರ ಸೇವೆಯಲ್ಲಿ ಯಶಸ್ವಿ ೨೯ ವರ್ಷಗಳನ್ನು ಪೂರೈಸಿ, ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿರುವ ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒಂದಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., 31/೦3/2023 ಕ್ಕೆ ರೂ.453 ಕೋಟಿ ಠೇವಣಾತಿ, ರೂ.382 ಕೋಟಿ ಹೊರಬಾಕಿ ಸಾಲ, 2022-23 ನೇ ಸಾಲಿನಲ್ಲಿ ರೂ.145 ಕೋಟಿ ವ್ಯವಹಾರದಲ್ಲಿ ವೃದ್ಧಿ, ರೂ. 9.84 ಕೋಟಿ ನಿವ್ವಳ ಲಾಭ ಹಾಗೂ ೦% ನೆಟ್ ಎನ್.ಪಿ.ಎ. ಮತ್ತು ರೂ. ೩೦೮೯ ಕೋಟಿ ಒಟ್ಟು ವಹಿವಾಟನ್ನು ಸಾಧಿಸಿರುವುದಕ್ಕೆ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನವರು ಈ ಸಾಧನೆಯನ್ನು ಗುರುತಿಸಿ, “2022-23 ನೇ ಸಾಲಿನಲ್ಲಿ ಸರ್ವತೋಮುಖ ವ್ಯವಹಾರಾಭಿವೃದ್ಧಿ ಹೊಂದಿದ ಅತ್ಯುತ್ತಮ ಕ್ರೆಡಿಟ್ ಸಹಕಾರಿ ಸಂಘ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.


ಪ್ರಶಸ್ತಿಯನ್ನು ಆ. 13 ರಂದು ಜರುಗಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರವರು, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸರ್ವ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಯೂನಿಯನ್‌ನ ಅಧ್ಯಕ್ಷರ ಸಮಕ್ಷಮದಲ್ಲಿ ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರಿಗೆ ಹಾಗೂ ಮಹಾಪ್ರಬಂಧಕ ಗಣೇಶ್ ಜಿ.ಕೆ.ಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಸಂಘಕ್ಕೆ 12 ನೇ ಬಾರಿ, ಹಾಗೂ 7 ವರ್ಷಗಳಿಂದ ನಿರಂತರವಾಗಿ ಲಭಿಸಿಕೊಂಡು ಬರುತ್ತಿದೆ.