ಚಂದ್ರಯಾನ-3 ರಲ್ಲಿ ಕಾರ್ಯನಿರ್ವಹಿಸಿದ ಮಾನಸ ಜಯಕುಮಾರ್ ರವರಿಗೆ ಶ್ರೀ ವೆಂಕಟರಮಣ ಸೊಸೈಟಿ ವತಿಯಿಂದ ಗೌರವಾರ್ಪಣೆ

0

ಇಸ್ರೋ ಸಂಸ್ಥೆಯ ಮಹತ್ವದ ಚಂದ್ರಯಾನ -3ರಲ್ಲಿ ಕಾರ್ಯನಿರ್ವಹಿಸಿದ ಸಂಶೋಧನಾ ವಿದ್ಯಾರ್ಥಿ ಸುಳ್ಯದ ಶ್ರೀಮತಿ ಮಾನಸ ಜಯಕುಮಾರ್ ರವರಿಗೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಇಂದು ಸನ್ಮಾನಿಸಲಾಯಿತು.
ಸುಳ್ಯದ ವೆಂಕಟರಮಣ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಅಧ್ಯಕ್ಷತೆ ವಹಿಸಿ ಅಭಿನಂದಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕ ಹಾಗೂ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್,ಸೊಸೈಟಿ ನಿರ್ದೇಶಕರುಗಳಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ,ಕೆ.ಸಿ.ನಾರಾಯಣ, ಎ.ವಿ.ತೀರ್ಥರಾಮ,ಪಿ.ಎಸ್.ಗಂಗಾಧರ್, ದಾಮೋದರ ನಾರ್ಕೋಡು,ಐ‌.ಕೆ.ಹೇಮಚಂದ್ರ, ದಿನೇಶ್ ಮಡಪ್ಪಾಡಿ, ನವೀನ್ ಕುಮಾರ್ ಜಾಕೆ ,ಶ್ರೀಮತಿನಳಿನಿ ಸೂರಯ್ಯ, ಶ್ರೀಮತಿ ಲತಾ ಸದಾನಂದ ಮಾವಜಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ವಂದಿಸಿದರು.
ಪ್ರಧಾನ ವ್ಯವಸ್ಥಾಪಕರಾದ ಚಂದ್ರಶೇಖರ ಮೇರ್ಕಜೆ ಹಾಗೂ ಸಿಬ್ಬಂದಿಗಳು ಹಾಗೂ ಮಾನಸರವರ ಪತಿ ಜಯಕುಮಾರ್,ತಾಯಿ ಕುಸುಮಾವತಿ ಉಪಸ್ಥಿತರಿದ್ದರು.