ಪಂಜ. : ಶ್ರೀ ದುರ್ಗಾ ಪೂಜೆ ಮತ್ತು ವರಮಹಾಲಕ್ಷ್ಮಿ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ

0

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇದರ ವಾರ್ಷಿಕ ದುರ್ಗಾ ಪೂಜೆ , ವರಮಹಾಲಕ್ಷ್ಮಿ ಪೂಜೆ , ಪ್ರತಿಭಾ ಪುರಸ್ಕಾರ ಆ.25. ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದ ಸಭಾಭವನದಲ್ಲಿ ಜರುಗಿತು.


ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ ಸಭಾಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ , ಗ್ರಾ.ಪಂ.ಸದಸ್ಯೆ ಶ್ರೀಮತಿ ಪೂರ್ಣಿಮಾ ದೇರಾಜೆ ಪಾಲ್ಗೊಂಡಿದ್ದರು.ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು.

ಗೌರವಾರ್ಪಣೆ :
ಪಂಜ ಗ್ರಾಮ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾರದೋತ್ಸವ ಸಮಿತಿಯ ಪೂರ್ವಾಧ್ಯಕ್ಷ ನಾರಾಯಣ ಕೃಷ್ಣನಗರ, ಗ್ರಾಮ ಪಂಚಾಯತ್ ಸದಸ್ಯೆ ,ನಿಕಟ ಪೂರ್ವಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಅವರನ್ನು ಗೌರವಿಸಲಾಯಿತು.ಈ ವೇಳೆ ಶ್ರೀಮತಿ ಸುಗಂಧಿ ಬಾಲಕೃಷ್ಣ ಪುತ್ಯ
ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ: ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿಗಳಾದ ವಿಕ್ರಮ್ ಜೆ.ಪಿ ಜಾಕೆ,ಲಿಖಿತಾ ಶೀರಾಜೆ, ಗಾಯತ್ರಿ ಎನ್ ನಾಗತೀರ್ಥ, ಸಾಯಿ ಪ್ರಾರ್ಥನ್ ಪಂಜ, ಅರ್ಜುನ್ ಕೆ ಕುದ್ವ ಮಲ್ಲೇಟಿ,ಲಿತಿನ್ ಕೆ.ಜೆ, ಚೈತ್ರಾ ಬಿ.ಎಲ್ ಬರೆಮೇಲು ರವರನ್ನು ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಹೇಮಂತ್ ರೈ ಕೇನ್ಯ ಪ್ರಾರ್ಥಿಸಿದರು. ಭಜನಾ ಮಂಡಳಿಯ ಕೋಶಾಧ್ಯಕ್ಷ ಲೋಕೇಶ್ ಬರೆಮೇಲು ಸ್ವಾಗತಿಸಿ ಪ್ರಾಸ್ತಾವಿಕಗೈದರು. ಭಜನಾ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ತೋಟ ನಿರೂಪಿಸಿದರು. ನಾರಾಯಣ ಶೀರಾಜೆ ವಂದಿಸಿದರು.