ಮರ್ಕಂಜ ಪ್ರೌಢಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಮರ್ಕಂಜ ಪ್ರೌಢಶಾಲೆಯಲ್ಲಿ ಆ.26 ರಂದು ನಡೆಯಿತು. ಮುಖ್ಯೋಪಾಧ್ಯಾಯರಾದ ಶ್ರೀಮತಿ‌ ವೀಣಾ ಎಂ.ಟಿ. ಯವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.


ಸುದ್ದಿಯ ಮಿತ್ತಡ್ಕ ಪ್ರತಿನಿಧಿ ದಾಮೋದರ ಪಾಟಾಳಿ ಹಾಗೂ ಮುಖ್ಯೋಪಾಧ್ಯಾಯರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ‌ ವಿತರಿಸಿದರು. ಸುದ್ದಿ ಬಿಡುಗಡೆಯ ವರದಿಗಾರ ದಯಾನಂದ ಕೊರತ್ತೋಡಿ ಹಾಗೂ ಶಿಕ್ಷಕಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.