ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ -ಯಕ್ಷಗಾನ ತಾಳಮದ್ದಳೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಯಕ್ಷಗಾನ ತಾಳಮದ್ದಳೆ ಆ.26ರಂದು ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು, ದೇವಸ್ಥಾನದ ತಕ್ಕರುಗಳಾದ ಪುರುಷೋತ್ತಮ ನಿಡ್ಯಮಲೆ, ಗಣಪತಿ ಕುಂಬಳಚೇರಿ , ಭಾಸ್ಕರ ಕೋಡಿ, ಆಡಳಿದ ಮಂಡಳಿಯ ಸದಸ್ಯ ಆರ್.ಡಿ.ಆನಂದ, ಆಡಳಿತ ಮಂಡಳಿಯ ಸಹ ಕಾರ್ಯದರ್ಶಿ ಚಿನ್ನಪ್ಪ ಅಡ್ಕ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.