ಅರಂಬೂರು :ಶ್ರೀ ವರಮಹಾಲಕ್ಷ್ಮಿ ಪೂಜೆ

0


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಅರಂಬೂರು ಒಕ್ಕೂಟ ಹಾಗೂ ಪರಿವಾರಕಾನ ಒಕ್ಕೂಟದ ಆಶ್ರಯದಲ್ಲಿ ೧೩ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.೨೫ರಂದು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೋಪಾಲಕೃಷ್ಣ ಸಭಾಭವನದಲ್ಲಿ ವೇದಮೂರ್ತಿ ಪುರೋಹಿತ ಅಭಿರಾಮ್ ಭಟ್ ರವರ ನೇತೃತ್ವದಲ್ಲಿ ಜರಗಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಯದ ನಾಗೇಶ್ ಪಿ., ಕಚೇರಿ ಪ್ರಬಂಧಕರಾದ ಆತೀಶ್, ಕಚೇರಿ ಸಿಬ್ಬಂದಿಗಳು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ಯತೀಶ್ ರೈ, ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀಪತಿ ಭಟ್ ಮಜಿಗುಂಡಿ, ಕೃಷ್ಣ ಕಾಮತ್ ಕೃಷ್ಣನಗರ, ಸುಳ್ಯ ವಲಯದ ಮೇಲ್ವಿಚಾರಕರಾದ ಪ್ರಿಯಾ, ಸಂಪಾಜೆ ವಲಯದ ಮೇಲ್ವಿಚಾರಕರಾದ ಜಯಶ್ರೀ, ಅಜ್ಜಾವರ ವಲಯದ ಮೇಲ್ವಿಚಾರಕರಾದ ವಿಶಾಲ, ಭಜನಾ ಮಂದಿರದ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಅರಂಬೂರು, ಉದಯನಾರಾಯಣ ಭಟ್ ಮಜಿಗುಂಡಿ, ಪರಿವಾರಕಾನ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಬಿ, ಅರಂಬೂರು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ ನೆಚ್ಚಿಲು, ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹಾಗೂ ಎರಡು ಒಕ್ಕೂಟದ ಪದಾಧಿಕಾರಿಗಳು ಪೂಜಾ ಸಮಿತಿ ಅಧ್ಯಕ್ಷರಾದ ರೇಖಾ ಅರಂಬೂರು, ಸೇವಾ ಪ್ರತಿನಿಧಿಗಳಾದ ಸುರೇಶ್ ಪರಿವಾರಕಾನ, ಅರಂಬೂರು ಸೇವಾ ಪ್ರತಿನಿಧಿಯಾದ ವಿಜಯಶ್ರೀ ಉಪಸ್ಥಿತರಿದ್ದರು.

ಸುಮಾರು ೧೦೦೦ ಜನ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.