ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಳ್ಳಾಕುಲು ಚಾವಡಿ ನಿರ್ಮಾಣದ ಪೂರ್ವ ಭಾವಿ ಸಭೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಸಂಬಂಧಿಸಿದ ಶ್ರೀ ಉಳ್ಳಾಕುಲು ಚಾವಡಿಯ ಜೀರ್ಣೋದ್ಧಾರ ಕಾರ್ಯದ ಕುರಿತು ಪೂರ್ವ ಭಾವಿ ಸಭೆಯು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷಎನ್.ಎ.ರಾಮಚಂದ್ರ ರವರ ಅಧ್ಯಕ್ಷತೆಯಲ್ಲಿ ಆ.26 ರಂದು ನಡೆಯಿತು.

ಉಳ್ಳಾಕುಲು ಚಾವಡಿ ನಿರ್ಮಾಣದ ಮರದ ಕೆತ್ತನೆ ಕೆಲಸ ಶಿಲ್ಪಿಗಳ ನೇತೃತ್ವದಲ್ಲಿ ಈಗಾಗಲೇ ಪ್ರಗತಿಯಲ್ಲಿದೆ.
ಮುಂದಿನ ವರ್ಷಾವಧಿ ಜಾತ್ರೋತ್ಸವಕ್ಕೆ ಮುಂಚಿತವಾಗಿ ಚಾವಡಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಬೇಕಾಗಿದ್ದು ಆರ್ಥಿಕ ಕ್ರೋಢಿಕರಣಕ್ಕೆ ಮನೆ ಮನೆಗೆ ದೇಣಿಗೆ ಸಂಗ್ರಹದ ಬಾಬ್ತು ತೆರಳುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ವೇದಿಕೆಯಲ್ಲಿ ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಶ್ರೀಪತಿ ಬೈಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ,ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಆರ್ಥಿಕ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಉಪಸ್ಥಿತರಿದ್ದರು.
ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೇವಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಭಜನಾ ಸಂಘದ ಸದಸ್ಯರು, ಅರ್ಚಕರು ಹಾಗೂ ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.