ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ

0

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಆಶ್ಲೇಷ ಬಲಿ ಕಾರ್ಯಕ್ರಮ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಆಶ್ಲೇಷ ಬಲಿ ವಿಶೇಷ ಕಾರ್ಯಕ್ರಮ ಆ. 26ರಂದು ವೇ.ಮೂ. ಶಾಂತಕುಮಾರ ಭಟ್ ಕಾಯಾರ ಇವರ ನೇತೃತ್ವದಲ್ಲಿ ನಡೆಯಿತು.

ದೇವಳದ ಧರ್ಮದರ್ಶಿಗಳು, ಆಶ್ಲೇಷ ಬಲಿ ಕಾರ್ಯಕ್ರಮ ಸಮಿತಿ ಸಂಚಾಲಕರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನೆರವೇರಿತು.