ಜಾಲ್ಸೂರು: ಮರಸಂಕ ಅಂಗನವಾಡಿ ಕೇಂದ್ರದ ವತಿಯಿಂದ ಅಗ್ನಿವೀರ್ ಕಿಶೋರ್ ಅವರಿಗೆ ಸನ್ಮಾನ

0

ಜಾಲ್ಸೂರು ಗ್ರಾಮದ ಮರಸಂಕ ಅಂಗನವಾಡಿ ಕೇಂದ್ರದ ವತಿಯಿಂದ ಅಗ್ನಿವೀರ್ ತರಬೇತಿ ಪೂರ್ತಿಗೊಳಿಸಿ, ಊರಿಗೆ ಆಗಮಿಸಿರುವ ಕಿಶೋರ್ ಶೇಷನಡ್ಕ ಅವರನ್ನು ಆ.29ರಂದು ಸನ್ಮಾನಿಸಲಾಯಿತು.

ಸುಳ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಹಾಗೂ ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಲೀನಾ ಅವರು ಕಿಶೋರ್ ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕಿಶೋರ್ ಅವರನ್ನು ಆರತಿ ಬೆಳಗಿ, ಪುಟಾಣಿ ಮಕ್ಕಳು ರಾಷ್ಟ್ರಧ್ವಜ ನೀಡಿ ಸ್ವಾಗತಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಕುಮಾರಿ ಆರ್. ಕಿಶೋರ್ ಅವರ ಪರಿಚಯಪತ್ರ ಓದಿದರು.

ಅಂಗನವಾಡಿ ಕಾರ್ಯಕರ್ತೆ ಕು. ತುಳಸಿ, ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿಯ ಸದಸ್ಯರುಗಳು , ಸ್ರ್ರೀಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ವಸಂತಿ, ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಅಂಜಲಿ ವಂದಿಸಿದರು. ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.